ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
TSK
TSK · ಲೂಕನು 12:32
مراجع Treasury of Scripture Knowledge في ಕನ್ನಡ IRV.
ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›
ಕೂಡಲೆ ಯೇಸು ಮಾತನಾಡಿ ಅವರಿಗೆ, ‹“ಧೈರ್ಯವಾಗಿರಿ ನಾನೇ ಭಯಪಡಬೇಡಿರಿ”› ಎಂದು ಹೇಳಿದನು.
‹ಹೀಗೆ›‹ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು”› ಎಂದು ಹೇಳಿದನು.
¶ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, ‹“ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.›
ಯೇಸು, ‹“ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ”› ಎಂದು ಉತ್ತರಕೊಟ್ಟನು.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.
¶ ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.