TSK

TSK · ಲೂಕನು 12:5

مراجع Treasury of Scripture Knowledge في ಕನ್ನಡ IRV.

العودة إلى المقطع

ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›

‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›

‹ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ”› ಹೇಳಿದ್ದೇನೆ.

ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.

ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.

ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.