ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.
TSK
TSK · ಲೂಕನು 13:24
مراجع Treasury of Scripture Knowledge في ಕನ್ನಡ IRV.
ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
¶ ‹“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.›
ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.
‹ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ”› ಎಂದನು.
‹ನನ್ನ ಮಕ್ಕಳೇ,›‹ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.›
ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.