ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
TSK
TSK · ಲೂಕನು 14:1
مراجع Treasury of Scripture Knowledge في ಕನ್ನಡ IRV.
ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
¶ ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.