TSK

TSK · ಲೂಕನು 15:28

مراجع Treasury of Scripture Knowledge في ಕನ್ನಡ IRV.

العودة إلى المقطع

ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.

ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,

ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.

ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.

‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.