¶ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
TSK
TSK · ಲೂಕನು 16:1
مراجع Treasury of Scripture Knowledge في ಕನ್ನಡ IRV.
¶ ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.
ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
¶ ‹“ದೇವರ ರಾಜ್ಯವು ಹೇಗೆಂದರೆ›‹ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.›
¶ ಕರ್ತನು ಹೇಳಿದ್ದೇನಂದರೆ, ‹“ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?›
‹ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.›
‹ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.›
ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.