TSK

TSK · ಲೂಕನು 16:9

مراجع Treasury of Scripture Knowledge في ಕನ್ನಡ IRV.

العودة إلى المقطع

ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.

ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.

ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›

ಯೇಸು ಅವನಿಗೆ, ‹“ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›

‹ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”›

‹ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ”› ಅಂದನು.

ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.