¶ ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
TSK
TSK · ಲೂಕನು 17:29
مراجع Treasury of Scripture Knowledge في ಕನ್ನಡ IRV.
ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.