ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
TSK
TSK · ಲೂಕನು 18:14
مراجع Treasury of Scripture Knowledge في ಕನ್ನಡ IRV.
ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.
ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
¶ ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
‹ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.›
‹ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು”› ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, ‹“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು”› ಎಂದು ಹೇಳಿದನು.
ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
ಆಗ ಆತನು ಅವರಿಗೆ ಹೇಳಿದ್ದೇನಂದರೆ, ‹“ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.›
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.