¶ ‹“ದೇವರ ರಾಜ್ಯವು ಹೇಗೆಂದರೆ›‹ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.›
TSK
TSK · ಲೂಕನು 19:12
مراجع Treasury of Scripture Knowledge في ಕನ್ನಡ IRV.
¶ ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, ‹“ಒಬ್ಬ ಮನುಷ್ಯನು›‹ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ›‹ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.›
¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
¶ ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, ‹“ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.›
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, ‹“ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ”› ಎಂದು ಉತ್ತರಕೊಟ್ಟನು.
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.