TSK

TSK · ಲೂಕನು 19:42

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”

ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.

ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.

ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.

¶ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?

‹“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ,› ‹‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.› ‹ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.›

ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.

ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.