TSK

TSK · ಲೂಕನು 2:32

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.

“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.

ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.

ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.