TSK

TSK · ಲೂಕನು 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

¶ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.

ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.

ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.

ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.

ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

¶ ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.