ಯೆಹೋಶುವ 6:19
TSK
ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.
TSK
مراجع Treasury of Scripture Knowledge في ಕನ್ನಡ IRV.
ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.
ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
¶ ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.