¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›
TSK
TSK · ಲೂಕನು 21:12
مراجع Treasury of Scripture Knowledge في ಕನ್ನಡ IRV.
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›
‹ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.›
ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
¶ ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,
ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.
ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
¶ ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
¶ ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
¶ ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.