ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
TSK
TSK · ಲೂಕನು 21:24
مراجع Treasury of Scripture Knowledge في ಕನ್ನಡ IRV.
ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.