TSK

TSK · ಲೂಕನು 22:19

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

¶ ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.

ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.

ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.

¶ ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ ‹“ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ”› ಎಂದನು.

ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.›

ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.

ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.

ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.