ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
TSK
TSK · ಲೂಕನು 23:42
مراجع Treasury of Scripture Knowledge في ಕನ್ನಡ IRV.
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
¶ ‹“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.›
‹ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ”› ಎಂದು ಹೇಳಿದನು.
ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.