TSK

TSK · ಲೂಕನು 24:27

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.

ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.

ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

¶ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.

ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

‹ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.›

ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.

¶ “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.

ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.