TSK

TSK · ಲೂಕನು 24:47

مراجع Treasury of Scripture Knowledge في ಕನ್ನಡ IRV.

العودة إلى المقطع

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

¶ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.

ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, ‹“ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.›

¶ ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, ‹“ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;›

‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›

ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

¶ ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.

¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

¶ ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.