¶ ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
TSK
TSK · ಲೂಕನು 6:21
مراجع Treasury of Scripture Knowledge في ಕನ್ನಡ IRV.
ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.
ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.
ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.
‹ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.›
‹ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನೀವು ಹಸಿಯುವಿರಿ.› ‹ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನೀವು ದುಃಖಪಟ್ಟು ಅಳುವಿರಿ.›
ಯೇಸು ಅವರಿಗೆ ‹“ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ›‹ಬಾಯಾರಿಕೆಯಾಗುವುದಿಲ್ಲ.›
ಯೇಸು ಕಣ್ಣೀರಿಟ್ಟನು.
¶ ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.