ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
TSK
TSK · ಲೂಕನು 6:42
مراجع Treasury of Scripture Knowledge في ಕನ್ನಡ IRV.
ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›
ಆ ಮಾತನ್ನು ಕೇಳಿ ಕರ್ತನು ಅವನಿಗೆ, ‹“ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.›
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.
¶ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;
ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.
ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.