ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
TSK
TSK · ಲೂಕನು 7:16
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.
ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.
ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.
ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.
ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.
ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.