ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
TSK
TSK · ಲೂಕನು 8:44
مراجع Treasury of Scripture Knowledge في ಕನ್ನಡ IRV.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.