ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
TSK
TSK · ಲೂಕನು 9:22
مراجع Treasury of Scripture Knowledge في ಕನ್ನಡ IRV.
ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
¶ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, ‹“ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.›
ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, ‹“ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು”› ಹೇಳಿದನು.
¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.
ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.