TSK

TSK · ಲೂಕನು 9:31

مراجع Treasury of Scripture Knowledge في ಕನ್ನಡ IRV.

العودة إلى المقطع

ಯೇಸು ಅವರಿಗೆ, ‹“ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ”› ಎಂದು ಹೇಳಿದನು.

¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

¶ ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.