ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
TSK
TSK · ಲೂಕನು 9:51
مراجع Treasury of Scripture Knowledge في ಕನ್ನಡ IRV.
¶ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
¶ ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.›
¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.
‹ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?›
¶ ‹“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.›
‹ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,›‹ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.›
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.