“ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
TSK
TSK · ಮಲಾಕಿಯ 1:14
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.
ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.
ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
¶ ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.
‹ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.›
‹ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.›
‹ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.›
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.