ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
TSK
TSK · ಮಲಾಕಿಯ 2:17
مراجع Treasury of Scripture Knowledge في ಕನ್ನಡ IRV.
ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.
ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ.
ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.
ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
¶ ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.
¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,