¶ ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
TSK
TSK · ಮಲಾಕಿಯ 3:10
مراجع Treasury of Scripture Knowledge في ಕನ್ನಡ IRV.
ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
¶ “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.
¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
¶ “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.
‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›
¶ ಅದೇನೆಂದರೆ ‹“ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.›
¶ ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.