TSK

TSK · ಮಲಾಕಿಯ 3:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.

ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.

ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.

ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.

ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?

ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.

ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.

¶ ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

¶ “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.