¶ “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ
TSK
TSK · ಮಲಾಕಿಯ 3:7
مراجع Treasury of Scripture Knowledge في ಕನ್ನಡ IRV.
¶ ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.
ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’
ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
‹ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.›
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.