ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
TSK
TSK · ಮಲಾಕಿಯ 4:3
مراجع Treasury of Scripture Knowledge في ಕನ್ನಡ IRV.
ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.
ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.
ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.