ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
TSK
TSK · ಮಾರ್ಕನು 10:47
مراجع Treasury of Scripture Knowledge في ಕನ್ನಡ IRV.
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.
ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.
ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
¶ ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.
ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.
ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.