TSK

TSK · ಮಾರ್ಕನು 11:33

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?

ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.

ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

‹ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ”› ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.

¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›

ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.

ಯೇಸು ಅವನಿಗೆ ಹೇಳಿದ್ದೇನಂದರೆ, ‹“ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?›

¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ.

ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.