ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
TSK
TSK · ಮಾರ್ಕನು 12:14
مراجع Treasury of Scripture Knowledge في ಕನ್ನಡ IRV.
ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.
ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.
ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
‹ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.›
ನಾನೇ ನಿಮ್ಮನ್ನು ದುಃಖಪಡಿಸಿದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?
¶ ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.
¶ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.