ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
TSK
TSK · ಮಾರ್ಕನು 12:3
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
¶ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
‹ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.›
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.