ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
TSK
TSK · ಮಾರ್ಕನು 3:2
مراجع Treasury of Scripture Knowledge في ಕನ್ನಡ IRV.
¶ ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
¶ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.