ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
TSK
TSK · ಮಾರ್ಕನು 4:31
مراجع Treasury of Scripture Knowledge في ಕನ್ನಡ IRV.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.
¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ತರುವಾಯ ಯೇಸು ಕೇಳಿದ್ದೇನಂದರೆ, ‹“ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?›
ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.