ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
TSK
TSK · ಮಾರ್ಕನು 5:7
مراجع Treasury of Scripture Knowledge في ಕನ್ನಡ IRV.
¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
¶ ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
¶ ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.