ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
TSK
TSK · ಮಾರ್ಕನು 8:38
مراجع Treasury of Scripture Knowledge في ಕನ್ನಡ IRV.
ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
¶ ‹“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.›
‹ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.›
‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
¶ ಯೇಸುವು ‹“ಹೌದು ನಾನೇ!› ‹“ಇದಲ್ಲದೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ,› ‹ಆಕಾಶದ ಮೇಘಗಳಲ್ಲಿ ಬರುವುದನ್ನೂ› ‹ನೀವು ನೋಡುವಿರಿ”› ಎಂದನು.
¶ ‹“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.›
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
‹ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.›
ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
¶ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,