ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
TSK
TSK · ಮಾರ್ಕನು 8:6
مراجع Treasury of Scripture Knowledge في ಕನ್ನಡ IRV.
ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
‹ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.