¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
TSK
TSK · ಮಾರ್ಕನು 9:31
مراجع Treasury of Scripture Knowledge في ಕನ್ನಡ IRV.
‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.
‹ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು”› ಎಂದು ಹೇಳಿದನು.
ಅದಕ್ಕೆ ಯೇಸು ಅವರಿಗೆ, ‹“ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?›
¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.›
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
‹ಇದಲ್ಲದೆ›‹ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.›
ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.