¶ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
TSK
TSK · ಮತ್ತಾಯನು 1:20
مراجع Treasury of Scripture Knowledge في ಕನ್ನಡ IRV.
ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.
ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,
ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”
ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
¶ ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
¶ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
¶ ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.