ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
TSK
TSK · ಮತ್ತಾಯನು 10:18
مراجع Treasury of Scripture Knowledge في ಕನ್ನಡ IRV.
¶ ‹“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,›
¶ ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.
¶ ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
¶ ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.