ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.
TSK
TSK · ಮತ್ತಾಯನು 10:19
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
¶ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
‹ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.›
¶ ‹“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,›
‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›
ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
¶ “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.