TSK

TSK · ಮತ್ತಾಯನು 11:3

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.

ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.

ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?

ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.

“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.