¶ ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.
TSK
TSK · ಮತ್ತಾಯನು 11:5
مراجع Treasury of Scripture Knowledge في ಕನ್ನಡ IRV.
ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›
‹“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ”› ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
‹ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.›
ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, ‹“ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ”› ಅಂದನು.
ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, ‹“ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ”› ಅಂದನು.
¶ ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
‹ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.›
‹ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು”› ಎಂದನು.
‹ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.›‹ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.›
ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
¶ ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.