TSK

TSK · ಮತ್ತಾಯನು 12:33

مراجع Treasury of Scripture Knowledge في ಕನ್ನಡ IRV.

العودة إلى المقطع

ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

‹ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?›

ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.

ಆದರೆ ಕರ್ತನು ಅವನಿಗೆ, ‹“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.›

ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.