ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
TSK
TSK · ಮತ್ತಾಯನು 13:20
مراجع Treasury of Scripture Knowledge في ಕನ್ನಡ IRV.
ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
‹ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.›
ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.